ಕೆ.ಎಸ್. ನರಸಿಂಹಸ್ವಾಮಿ | ನಾಡಗೀತೆ | ಮೈಸೂರ ಮಲ್ಲಿಗೆ | ಮೈಸೂರು ಮಲ್ಲಿಗೆ | ೧೯೯೨
ಆಕಾಶಕ್ಕೆದ್ದು ನಿಂತ ಪರ್ವತ ಹಿಮ ಮೌನದಲ್ಲಿ
ಕರಾವಳಿಗೆ ಮುತ್ತನಿಡುವ ಬೆಬ್ಬೆರೆಗಳ ಗಾನದಲ್ಲಿ
ಬಯಲ ತುಂಬ ಹಸಿರ ದೀಪ ಹಚ್ಚಿ ಹರಿವ ನದಿಗಳಲ್ಲಿ
ನೀಲಿಯಲ್ಲಿ ಹೊಗೆಯ ಚೆಲ್ಲಿ ಯಂತ್ರ ಘೋಷ ಬೀಳುವಲ್ಲಿ
ಕಣ್ಣು ಬೇರೆ ನೋಟ ಒಂದು ನಾವು ಭಾರತೀಯರು
ನಾಡಿನೆಲ್ಲ ಗಡಿಗಳಲ್ಲಿ ಬಾನಿನಲ್ಲಿ ಕಡಿಲಿನಲ್ಲಿ
ನಮ್ಮ ಯೋಧರೆತ್ತಿಹಿಡಿದ ನಮ್ಮ ಧ್ವಜದ ನೆರಳಿನಲ್ಲಿ
ಒಂದೆ ನೆಲದ ತೊಟ್ಟಿಲಲ್ಲಿ ಬೆಳೆದು ನಮ್ಮ ಕೊರಳಿನಲ್ಲಿ
ನಮ್ಮ ಯುಗದ ದನಿಗಳಾಗಿ ಮೂಡಿತೆಲ್ಲ ಹಾಡಿನಲ್ಲಿ
ಭಾಷೆ ಬೇರೆ ಭಾವ ಒಂದು ನಾವು ಭಾರತೀಯರು
ನಾಡಿಗಾಗಿ ತನುವತೆತ್ತ ಹುತಾತ್ಮರ ಸ್ಮರಣೆಯಲ್ಲಿ
ನಮ್ಮ ಕಷ್ಟದಲ್ಲಿ ನೆರೆಗೆ ನೆರಳ ನೀವ ಕರುಣೆಯಲ್ಲಿ
ದಾರಿ ಬಳಸಿ ಏರುವಲ್ಲಿ ಬಿರುಗಾಳಿಯೆ ಮೊಳಗುವಲ್ಲಿ
ನಮ್ಮ ಗುರಿಯ ಬೆಳಕಿನೆಡೆಗೆ ನೆಡೆವ ಧೀರ ಪಯಣದಲ್ಲಿ
ಎಲ್ಲೆ ಇರಲಿ ನಾವು ಒಂದು ನಾವು ಭಾರತೀಯರು
ಆಕಾಶಕ್ಕೆದ್ದು ನಿಂತ ಪರ್ವತ ಹಿಮ ಮೌನದಲ್ಲಿ
ಕರಾವಳಿಗೆ ಮುತ್ತನಿಡುವ ಬೆಬ್ಬೆರೆಗಳ ಗಾನದಲ್ಲಿ
ಬಯಲ ತುಂಬ ಹಸಿರ ದೀಪ ಹಚ್ಚಿ ಹರಿವ ನದಿಗಳಲ್ಲಿ
ನೀಲಿಯಲ್ಲಿ ಹೊಗೆಯ ಚೆಲ್ಲಿ ಯಂತ್ರ ಘೋಷ ಬೀಳುವಲ್ಲಿ
ಕಣ್ಣು ಬೇರೆ ನೋಟ ಒಂದು ನಾವು ಭಾರತೀಯರು
ನಾಡಿನೆಲ್ಲ ಗಡಿಗಳಲ್ಲಿ ಬಾನಿನಲ್ಲಿ ಕಡಿಲಿನಲ್ಲಿ
ನಮ್ಮ ಯೋಧರೆತ್ತಿಹಿಡಿದ ನಮ್ಮ ಧ್ವಜದ ನೆರಳಿನಲ್ಲಿ
ಒಂದೆ ನೆಲದ ತೊಟ್ಟಿಲಲ್ಲಿ ಬೆಳೆದು ನಮ್ಮ ಕೊರಳಿನಲ್ಲಿ
ನಮ್ಮ ಯುಗದ ದನಿಗಳಾಗಿ ಮೂಡಿತೆಲ್ಲ ಹಾಡಿನಲ್ಲಿ
ಭಾಷೆ ಬೇರೆ ಭಾವ ಒಂದು ನಾವು ಭಾರತೀಯರು
ನಾಡಿಗಾಗಿ ತನುವತೆತ್ತ ಹುತಾತ್ಮರ ಸ್ಮರಣೆಯಲ್ಲಿ
ನಮ್ಮ ಕಷ್ಟದಲ್ಲಿ ನೆರೆಗೆ ನೆರಳ ನೀವ ಕರುಣೆಯಲ್ಲಿ
ದಾರಿ ಬಳಸಿ ಏರುವಲ್ಲಿ ಬಿರುಗಾಳಿಯೆ ಮೊಳಗುವಲ್ಲಿ
ನಮ್ಮ ಗುರಿಯ ಬೆಳಕಿನೆಡೆಗೆ ನೆಡೆವ ಧೀರ ಪಯಣದಲ್ಲಿ
ಎಲ್ಲೆ ಇರಲಿ ನಾವು ಒಂದು ನಾವು ಭಾರತೀಯರು
No comments:
Post a Comment
Note: Only a member of this blog may post a comment.