ಚಿತ್ರ: ಮುಂಗಾರು ಮಳೆ
ಹಾಡಿದವರು: ಶ್ರೇಯ ಘೋಶಾಲ್
ನಟರು: ಗಣೇಶ್, ಪೂಜಾ ಗಾಂಧಿ
ಇವನು ಗೆಳೆಯನಲ್ಲ ಗೆಳತಿ ನಾನು ಮೊದಲೇ ಅಲ್ಲ
ಇವನು ಇನಿಯನಲ್ಲ ತುಂಬಾ ಸನಿಹ ಬಂದಿಹನಲ್ಲ
ನೋವಿನಲ್ಲೂ ನಗುತಿಹನಲ್ಲ ಯಾಕೆ ಈ ಥರ
ಜಾಣ ಮನವೇ ಕೇಳು ಜಾರಬೇಡ ಇವನ ಕಡೆಗೆ
ಯಾಕೆ ನಿನಗೆ ಸಲ್ಲದ ಸಲಿಗೆ, ಇರಲಿ ಅಂತರ
ಒಲವ ಹಾದಿಯಲ್ಲಿ ಇವನು ನನಗೆ ಹೂವೋ ಮುಳ್ಲೋ
ಮನದ ಕಡಲಿನಲ್ಲಿ ಇವನು ಅಲೆಯೋ ಭೀಕರ ಸುಳಿಯೊ
ಅರಿಯದಂಥ ಹೊಸ ಕಂಪನವೊ ಯಾಕೋ ಕಾಣೆನೊ
ಅರಿತೊ ಮರೆತೊ ಜೀವ ವಾಲದಂತೆ ಇವನ ಕಡೆಗೆ
ಸೋಲದಂತೆ ಕಾಯೇ ಮನವೆ ಉಳಿಸು ನನ್ನನು
ಇವನು ಇನಿಯಲ್ಲ ತುಂಬ ಸನಿಹ ಬಂದಿಹನಲ್ಲ
ತಿಳಿದು ತಿಳಿದು ಇವನು ತನ್ನ ತಾನೇ ಸುಡುತಿಹನಲ್ಲ
ಒಲುಮೆ ಎಂಬ ಸುಳಿಗೆ ಈಜು ಬರದೆ ಇಳಿದಿಹನಲ್ಲ
ಸಾವಿನಲ್ಲು ನಗುವುದ ಬಲ್ಲ ಏನೋ ಕಳವಳ
ಮುಳುಗುವವನ ಕೂಗು ಚಾಚುವಂತೆ ಮಾಡಿದೆ ಕೈಯ
ಜಾರಿ ಬಿಡುವುದೇ ಈ ಹೃದಯ ಏನೋ ತಳಮಳ
ಇವನು ಇನಿಯನಲ್ಲ ತುಂಬ ಸನಿಹ ಬಂದಿಹನಲ್ಲ
No comments:
Post a Comment
Note: Only a member of this blog may post a comment.