ಚಿತ್ರ: ಗೀತ
ಹಾಡಿದವರು: ಎಸ್ ಪಿ ಬಾಲು
ನಟರು: ಶಂಕರ್ ನಾಗ್
ಕೇಳದೆ ನಿಮಗೀಗ ದೂರದಲ್ಲಿ ಯಾರೋ ಹಾಡು ಹೇಳಿದಂತೆ
ಒಂದು ಹೆಣ್ಣಿನ... ಓ..... ನೊಂದ ವಿರಹ ಗೀತೆ
ಸಂಪಿಗೆ ಒಂದೂರು ಮಲ್ಲಿಗೆ ಒಂದೂರು, ನಡುವಲ್ಲಿ ನದಿಯೊಂದು
ಹಗ್ಗದ ಉಯ್ಯಾಲೆ ತೂಗುವ ಹಾಗೊಂದು, ಸೇತುವೆಯು ಅಲ್ಲೊಂದು
ಈ ಊರ ಚೆಲುವೆ ಆ ಊರ ಚೆಲುವ, ನದಿಯಂಚಲಿ ಓಡಾಡುತ ಎದುರಾದರು ಒಮ್ಮೆ
ಚೆಲುವೆಯ ಕಂಡಾಗ ಚೆಲುವನ ಮನದಲ್ಲಿ ನೂರಾಸೆ ಬಂದಾಗ
ಚೆಲುವೆಯ ಕಣ್ಣಲ್ಲಿ ಚೆಲುವನು ಮನೆಮಾಡಿ ಶಿಲೆಯಂತೆ ನಿಂತಾಗ
ಹೂವಾಗಿ ಮನಸು ನೂರಾರು ಕನಸು ಬೆರಗಾದರು ಒಳವಿನ್ದಲಿ ಒಂದಾದರು ಆಗ........
ಚೆಲುವೆಯ ಮಾವಯ್ಯ ಒಲವಿನ ಕತೆ ಕೇಳಿ ಹುಲಿಯಂತೆ ಎಗರಾಡಿ
ಸೇತುವೆ ಬಳಿ ಬಂದಾಗ ಪ್ರೇಮಿಗಳ ಕಂಡಾಗ ರೋಷದಲಿ ಕೂಗಾಡಿ
ಹಲ್ಲನ್ನು ಮಸೆದ ಸೇತುವೆಯ ಕಡಿದ
ಆ ಜೋಡಿಯ ಕತೆಯಂದಿಗೆ ಕೊನೆಯಾಯಿತು ಹೀಗೆ........
No comments:
Post a Comment
Note: Only a member of this blog may post a comment.