ಜಿಮ್ಮಿ ಗಲ್ಲು(1982)......ತುತ್ತು ಅನ್ನ ತಿನ್ನೋಕೆ
ಚಿ. ಉದಯಶಂಕರ್ | ಚಿತ್ರಗೀತೆ | ಜಿಮ್ಮಿ ಗಲ್ಲು
ಚಿತ್ರ :ಜಿಮ್ಮಿ ಗಲ್ಲು(1982)
ಸಾಹಿತ್ಯ : ಚಿ.ಉದಯಶಂಕರ್
ಸಂಗೀತ : ವಿಜಯಭಾಸ್ಕರ್
ಗಾಯನ : ಡಾ.ವಿಷ್ಣುವರ್ಧನ್
ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ
ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ
ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ
ಅoಗೈಯಗಲ ಜಾಗ ಸಾಕು ಹಾಯಾಗಿರೋಕೆ
ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ
ಕಾಡ್ನಾಗೊoದು ಮರವೇ ಒಣಗಿ ಬಿದ್ರೆ ಏನಾಯ್ತು
ಊರ್ನಾಗೊoದು ಮನೆಯೇ ಉರಿದು ಹೋದ್ರೆ ಏನಾಯ್ತು
ಕಾಡ್ನಾಗೊoದು ಮರವೇ ಒಣಗಿ ಬಿದ್ರೆ ಏನಾಯ್ತು
ಊರ್ನಾಗೊoದು ಮನೆಯೇ ಉರಿದು ಹೋದ್ರೆ ಏನಾಯ್ತು
ಒಂದು ಅಲ್ಲೇ ನನ್ನ ಹೋಗು ಅಂದರೇನು
ಸ್ವರ್ಗದಂತಾ ಊರು ನನ್ನ ಹತ್ತಿರ ಕರೆದಾಯ್ತು
ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ
ದುಡಿಯೋದಕ್ಕೆ ಮೈಯ್ಯಾ ತುಂಬಾ ಶಕ್ತಿ ತುಂಬೈತೆ
ಅಡ್ಡ ದಾರಿ ಹಿಡಿಯೋದ್ ತಪ್ಪು ಅಂಥ ಗೊತ್ತೈತೆ
ದುಡಿಯೋದಕ್ಕೆ ಮೈಯ್ಯಾ ತುಂಬಾ ಶಕ್ತಿ ತುಂಬೈತೆ
ಅಡ್ಡ ದಾರಿ ಹಿಡಿಯೋದ್ ತಪ್ಪು ಅಂಥ ಗೊತ್ತೈತೆ
ಕಷ್ಟಾ ಒಂದೇ ಬರದು ಸುಖವೂ ಬರದೇ ಇರದು
ರಾತ್ರೀ ಮುಗಿದಾ ಮೇಲೇ ಹಗಲು ಬಂದೇ ಬತ್ತೈತೆ
ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ
ಹರಿಯೋ ನದಿಯು ಒಂದೇ ಕಡೆ ನಿಲ್ಲೊಕ್ಕಾಗಲ್ಲ
ಹುಟ್ಟಿದ ಮನುಷ ಒಂದೇ ಊರಲಿ ಬಾಳೋಕಾಗಲ್ಲ
ಹರಿಯೋ ನದಿಯು ಒಂದೇ ಕಡೆ ನಿಲ್ಲೊಕ್ಕಾಗಲ್ಲ
ಹುಟ್ಟಿದ ಮನುಷ ಒಂದೇ ಊರಲಿ ಬಾಳೋಕಾಗಲ್ಲ
ದೇವ್ರು ತಾನೇ ನಂಗೆ ಅಪ್ಪ ಅಮ್ಮ ಎಲ್ಲಾ
ಸಾಯೋ ತನಕಾ ನಂಬಿದವರ ಕೈ ಬಿಡಾಕಿಲ್ಲ
ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ
ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ
ಅoಗೈಯಗಲ ಜಾಗ ಸಾಕು ಹಾಯಾಗಿರೋಕೆ
ಹಾಯಾಗಿರೋಕೆ..ಹಾಯಾಗಿರೋಕೆ..
No comments:
Post a Comment
Note: Only a member of this blog may post a comment.