ಬಾರಿಸು ಕನ್ನಡ...
- ಕುವೆಂಪು
ಬಾರಿಸು ಕನ್ನಡ ಡಿಂಡಿಮವ ||
ಓ! ಕರ್ನಾಟಕ ಹೃದಯ ಶಿವ
ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ವಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು
ಚೈತ ಶಿವೇತರ ಕೃತಿ ಕೃತಿಯಲ್ಲಿ
ಮೂಡಲಿ ಮಂಗಳ ಮತಿ ಮತಿಯಲ್ಲಿ
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ
No comments:
Post a Comment
Note: Only a member of this blog may post a comment.