ನೀ ಸಿಗದೇ ಬಾಳೊಂದು...
- ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ
ನೀ ಸಿಗದೇ ಬಾಳೊಂದು ಬಾಳೆ ಕೃಷ್ಣ ||
ನಾ ತಾಳಲಾರೆ ಈ ವಿರಹ ಕೃಷ್ಣ
ಕಮಲವಿಲ್ಲದ ಕೆರೆ ನನ್ನ ಬಾಳು
ಚಂದ್ರ ಇಲ್ಲದ ರಾತ್ರಿ ಬೀಳು
ನೀ ಸಿಗದೇ ಉರಿ ಉರಿ ಕಳೆದೆ ಇರುಳ
ಮಾತಿಲ್ಲ ಬಿಗಿದಿದೆ ದುಃಖ ಕೊರಳ
ಅನ್ನ ಸೇರದು ನಿದ್ದೆ ಬಂದೂದೆಂದು
ಕೂಡಿವೆ ಒಂದೇ ಸಮ ಕೃಷ್ಣ ಎಂದು
ಯಾರು ಅರಿವರು ಹೇಳು ನನ್ನ ನೋವ
ತಲ್ಲಣಿಸಿ ಕೂಗುತಿದೆ ದಾಸಿ ಜೀವ
ಒಳಗಿರುವ ಗಿರಿಧರನೆ ಹೊರಗೆ ಬಾರೊ
ಕಣ್ಣೆದುರು ನಿಂತು ಆ ರೂಪ ತೋರೊ
ಜನುಮ ಜನುಮದ ರಾಗ ನನ್ನ ಪ್ರೀತಿ
ನಿನ್ನೊಳಗೆ ಹರಿವುದೇ ಅದರ ರೀತಿ
No comments:
Post a Comment
Note: Only a member of this blog may post a comment.